Friday, December 19, 2014

ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ, 
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ - ೨
ಕರುನಾಡು ಸ್ವರ್ಗದ ಸೀಮೆ, ಕಾವೇರಿ ಹುಟ್ಟಿದ ನಾಡು,
ಕಲ್ಲಲಿ ಕಲೆಯನು ಕಂಡ, ಬೇಲೂರು ಶಿಲ್ಪದ ಬೀಡು
ಬಸವೇಶ್ವರ, ರನ್ನ-ಪಂಪರ ಸವಿ ವಾಣಿಯ ನಾಡು
ಚಾಮುಂಡಿ ರಕ್ಷೆಯು ನಮಗೆ, ಗೊಮಟೆಷ ಕಾವಲು ಇಲ್ಲಿ,
ಶ್ರಿಂಗೇರಿ ಶಾರದೆ ವೀಣೆ, ರಸ ತುಂಗೆ ಆಗಿದೆ ಇಲ್ಲಿ,
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಏಳೇಳು ಜನ್ಮವೇ ಬರಲಿ ಈ ಮಣ್ಣಲಿ ನಾನು ಹುಟ್ಟುವೆ,
ಎನೇನು ಕಷ್ಟವೇ ಇರಲಿ ಸಿರಿಗನ್ನಡ ತಾಯ್ಗೆ ದುಡಿವೆ,
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ, 
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ

Yava Mohana Murali Kareyithu


ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು

ಹೂವು ಹಾಸಿಗೆ ಚಂದ್ರ ಚಂದನ
ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ
ಕರಣ ಗಣದೀ ರಿಂಗನ

ಸಪ್ತ ಸಾಗರದಾಚೆ ಎಲ್ಲೊ
ಸುಪ್ತ ಸಾಗರ ಕಾದಿದೆ
ಮೊಳೆಯ ದಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ?

ವಿವಶವಾಯಿತು ಪ್ರಾಣ - ಹಾ!!
ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ

ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕಯ್ಯನು

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು